Showing posts with label ಪುರಂದರದಾಸರು. Show all posts
Showing posts with label ಪುರಂದರದಾಸರು. Show all posts
ಮನವ ಶೋಧಿಸಬೇಕೋ (ಶ್ರೀ ಪುರಂದರದಾಸರು)
ಮನವ ಶೋಧಿಸಬೇಕೋ (ಶ್ರೀ ಪುರಂದರದಾಸರು)
ಮನವ ಶೋಧಿಸಬೇಕೋ ನಿಚ್ಚ
ದಿನದಿನವು ಮಾಡುವ ಪಾಪಪುಣ್ಯದ ವೆಚ್ಚ || ಪ ||
ಧರ್ಮ-ಅಧರ್ಮ ವಿಂಗಡಿಸಿ ನೀ
ಅಧರ್ಮದ ನರಗಳ ಬೇರೆ ಕತ್ತರಿಸಿ
ನಿರ್ಮಲಾಚಾರವ ಚರಿಸಿ ಪರ
ಬ್ರಹ್ಮ ಮೂರುತಿ ಪಾದಕಮಲವ ಭಜಿಸಿ || ೧ ||
ತನುವ ಖಂಡಿಸಿ ಒಮ್ಮೆ ಮಾಣೋ ನಿನ್ನ
ಮನವ ದಂಡಿಸಿ ಪರಮಾತ್ಮನ್ನ ಕಾಣೋ
ಕೊನೆಗೆ ನಿನ್ನೊಳು ನೀನೇ ಜಾಣೋ ಮುಕ್ತಿ
ನಿನಗೆ ದೂರಿಲ್ಲವೋ ಅದೇ ಒಂದು ಗೇಣೋ || ೨ ||
ಆತನ್ನ ನಂಬಿ ಕೇಡಿಲ್ಲ ಅವ
ಪಾತಕ ಪತಿತ ಸಂಗವ ಮಾಳ್ವನಲ್ಲ
ನೀತಿವಂತರೆ ಕೇಳಿರೆಲ್ಲ ನಮ-
ಗಾತನೆ ಗತಿಯೀವ ಪುರಂದರ ವಿಠಲ || ೩ |
ಲಾಲಿಸಿದಳು ಮಗನ ಯಶೋದೆ
ರಚನೆ : ಪುರಂದರ ದಾಸರು
ಲಾಲಿಸಿದಳು ಮಗನ ಯಶೋದೆ
ಲಾಲಿಸಿದಳು ಮಗನ
ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು
ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ|| ೧
ಬಾಲಕನೆ ಕೆನೆ ಹಾಲು ಮೊಸರನೀವೇ
ಲೀಲೆಯಿಂದಲಿ ಎನ್ನ ತೋಳ ಮೇಲೆ ಮಲಗೆಂದು || ೨
ಮುಗುಳುನಗೆಯಿಂದ ಮುದ್ದು ತಾತಾರೆಂದು
ಜಗದೊಡೆಯನೇ ಶ್ರೀಪುರಂದರ ವಿಠಲನ || ೩
ನಾರಾಯಣ ನಿನ್ನ ನಾಮದ ಸ್ಮರಣೆಯ
ನಾರಾಯಣ ನಿನ್ನ ನಾಮದ ಸ್ಮರಣೆಯ
ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ ||
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ |
ಎಷ್ಟಾದರೂ ಮತಿಗೆಟ್ಟು ಇರಲಿ |
ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ
ಅಷ್ಟಾಕ್ಷರ ಮಹಾಮಂತ್ರ ಒಂದಿರಲಿ ||1||
ಸಂತತ ಹರಿ ನಿನ್ನ ಸಾಸಿರ ನಾಮವ
ಅಂತರಗದ ಒಳಗಿರಿಸಿ (ಒಳಗೆ ಇಟ್ಟು)
ಎಂತೋ ಪುರಂದರ ವಿಟ್ಠಲ ರಾಯನ
ಅಂತ್ಯ ಕಾಲದಲ್ಲಿ ಚಿಂತಿಸೋ ಹಾಗೆ ||2||
Subscribe to:
Posts (Atom)


